Followers

Tuesday, January 7, 2025

jila panchayat taluka panchayat chunav ane

'ಚುನಾವಣೆ ವಿಚಾರ ನ್ಯಾಯಾಲಯಗಳ ಮುಂದಿರುವುದರಿಂದ ಅಲ್ಲಿಯೇ ಇತ್ಯರ್ಥವಾಗಬೇಕು. ಚುನಾವಣೆ ನಡೆಸಲು ನಾವಂತೂ ತಯಾರಾಗಿದ್ದೇವೆ' ಎಂದು

ಸಿಎಂ ಸಿದ್ದರಾಮಯ್ಯ ಎರಡು ದಿನದ ಹಿಂದಷ್ಟೇ ಪ್ರತಿಕ್ರಿಯಿಸಿದ್ದರು. ಇದೀಗ ಜನವರಿ 29ರಂದು ಸರ್ಕಾರದ ನಿಲುವು ಸ್ಪಷ್ಟವಾಗಲಿದೆ. ಅಂದು ಸರ್ಕಾರ ತಾನು ಕೈಗೊಂಡಿರುವ ಕ್ರಮವನ್ನು ನ್ಯಾಯಾಲಯದ ಮುಂದೆ ಸ್ಪಷ್ಟಪಡಿಸಲಿದೆ.

ಈ ಬೆಳವಣಿಗೆಗೆ ಪೂರಕವಾಗಿ, ಚುನಾವಣೆ ಸಂಬಂಧ ಕೋರ್ಟ್ನಲ್ಲಿ ಇರುವ ಪ್ರಕರಣ ಇತ್ಯರ್ಥಕ್ಕೆ ತಕ್ಷಣವೇ ಗಮನ ನೀಡುವುದು, ಚುನಾವಣೆಗೆ ಪೂರಕ ವಾತಾವರಣ ನಿರ್ವಿುಸುವುದು, ಬಜೆಟ್ನಲ್ಲಿ ಈ ನಿಟ್ಟಿನಲ್ಲಿ ಆದ್ಯತೆ, ಮುಖ್ಯವಾಗಿ ಮಾರ್ಚ್ನಲ್ಲಿ ಬಜೆಟ್ ಅಧಿವೇಶನ ಮುಗಿದ ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆಗೆ ಅವಕಾಶ ಆಗುವಂತೆ ಮಾಡುವ ಕುರಿತು ಸಮಾಲೋಚನೆ ನಡೆದಿವೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳು ತಿಳಿಸಿವೆ.

ಅವಧಿ ಮುಗಿದರೂ ಕಳೆದ ನಾಲ್ಕು ವರ್ಷಗಳಿಂದ ತಾಲೂಕು, ಜಿಲ್ಲಾ ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಡೆದಿಲ್ಲ ಎಂದು ಚುನಾವಣಾ ಆಯೋಗ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿತ್ತು. ಕೋರ್ಟ್ನಲ್ಲಿ ವಿಚಾರಣೆಗೆ ಬಂದಾಗ ಸರ್ಕಾರ ಕಾಲಾವಕಾಶ ಕೋರಿತ್ತು. ಜತೆಗೆ ಚುನಾವಣೆ ನಡೆಸಲು ಮೀಸಲು ಮತ್ತು ಕ್ಷೇತ್ರ ಭೌಗೋಳಿಕ ಗಡಿಗಳನ್ನು ನಿರ್ಧರಿಸುವ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ; ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಹೇಳಿಕೊಂಡಿತ್ತು. ಇದೀಗ ಈ ಕಾರ್ಯ ಮುಗಿದಿದೆ. ಅಧಿಸೂಚನೆ ಪ್ರಕಟವಾಗಬೇಕಾಗಿದೆ. ಈ ನಡುವೆ ಆಯೋಗ ಪುನಃ ಕೋರ್ಟ್ ಕದ ತಟ್ಟಿದ್ದು ಮತ್ತೊಮ್ಮೆ ನಿರ್ದೇಶನ ನೀಡುವಂತೆ ಕೋರಿದೆ. ಜನವರಿ 29ರಂದು ಈ ಪ್ರಕರಣ ವಿಚಾರಣೆಗೆ ಬರುತ್ತಿದ್ದು, ಅಲ್ಲಿ ಸರ್ಕಾರ ತನ್ನ ಅಂತಿಮ ನಿರ್ಧಾರ ತಿಳಿಸಲಿದೆ.

ನಿರ್ಧಾರಕ್ಕೆ ಕಾರಣ?: ಮಾರ್ಚ್- ಏಪ್ರಿಲ್ನಲ್ಲಿ ಬಹುತೇಕ ಪರೀಕ್ಷೆ ಮುಗಿಯುತ್ತವೆ. ಏಪ್ರಿಲ್ನಲ್ಲಿ ಚುನಾವಣೆ ಘೋಷಣೆಯಾದರೆ ಮೇ ಅಂತ್ಯದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬಹುದು, ಹೀಗಾಗಿ ಮೇ ಪ್ರಶಸ್ತ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ. ಚುನಾವಣೆ ದಿನಾಂಕ ನಿಗದಿ ಮಾಡುವುದು ಆಯೋಗವಾದರೂ ಈ ಅವಧಿಗೆ ಪೂರಕ ವಾತಾವರಣವನ್ನು ಸರ್ಕಾರ ಸೃಷ್ಟಿಸಿಕೊಡಬೇಕೆಂಬ ತೀರ್ವನಕ್ಕೆ ಬರಲಾಗಿದೆ.

ಮೀಸಲು ಪ್ರಕಟ ಬಾಕಿ: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಮೀಸಲು ಹಂಚಿಕೆ ಪ್ರಕ್ರಿಯೆ ನಡೆಯಬೇಕು. ಮೀಸಲು ಪಟ್ಟಿ ಸಿದ್ಧವಾಗಿದ್ದು ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಂದಿದೆ. ಮುಖ್ಯಮಂತ್ರಿ ಸೂಚನೆ ಬರುತ್ತಿದ್ದಂತೆ ಸಚಿವರ ಸಹಿ ಬೀಳಲಿದ್ದು, ಕರಡು ಪ್ರಕಟಣೆ ಹೊರಬೀಳಲಿದೆ. ನಂತರ ಆಕ್ಷೇಪಣೆಗೆ ಅವಕಾಶ ನೀಡಲಾಗುತ್ತದೆ. ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಆಯೋಗವು ಆ ಪಟ್ಟಿಯನ್ನು ಆಧರಿಸಿ ಪ್ರಕ್ರಿಯೆ ನಡೆಸಲು ಒಂದೂವರೆ ತಿಂಗಳು ಕಾಲಾವಕಾಶ ತೆಗೆದುಕೊಂಡು ನಂತರದಲ್ಲಿ ಚುನಾವಣೆ ದಿನಾಂಕ ನಿಗದಿ ಮಾಡಲಿದೆ.

ಬಿಬಿಎಂಪಿ ಚುನಾವಣೆಗೆ ಬಗ್ಗೆ ನಿರಾಸಕ್ತಿ?: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರದಲ್ಲಿ ಸರ್ಕಾರದಲ್ಲಿ ನಿಲುವು ಸ್ಪಷ್ಟವಾಗಿಲ್ಲ. ಬಿಬಿಎಂಪಿ ವಿಭಜನೆ ಆಗಬೇಕೆಂಬ ಬಗ್ಗೆ ಪಕ್ಷದ ಶಾಸಕರಲ್ಲೇ ಒಮ್ಮತ ಇಲ್ಲ. ಹೀಗಾಗಿ ಅವರನ್ನೆಲ್ಲ ಮುಂಬರುವ ಬಜೆಟ್ ಅಧಿವೇಶನದ ವೇಳೆಗೆ ಒಟ್ಟಿಗೆ ಸೇರಿಸಿ ಒಮ್ಮತಕ್ಕೆ ತರುವ ಪ್ರಯತ್ನ ನಡೆಯಲಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ಜಿಲ್ಲಾ ಪಂಚಾಯಿತಿ: 31
ತಾಲೂಕು ಪಂಚಾಯಿತಿ: 239
ತಾ.ಪಂ. ಸ್ಥಾನಗಳು: 3903
ಜಿ.ಪಂ. ಸ್ಥಾನಗಳು: 1083
ಅಂದಾಜು ಮತದಾರು: 3 ಕೋಟಿ
ಆತನ ವರ್ತನೆಯಿಂದಲೇ ತಂಡ ಒತ್ತಡಕ್ಕೆ ಸಿಲುಕಲು ಪ್ರಮುಖ ಕಾರಣ; Virat Kohli ಕುರಿತು ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಕ್ರಿಕೆಟಿಗ

ಶಬ್ದಗಳಿಗಿಂತ ಅದನ್ನು ಕೇಳುವವರಿಗೆ… ವಿಚ್ಛೇದನ ವದಂತಿ ನಡುವೆ Yuzvendra Chahal ಮತ್ತೊಂದು ಪೋಸ್ಟ್ ವೈರಲ್

ಮಾಹಿತಿಗಾಗಿ

*ಮಾಹಿತಿಗಾಗಿ*

*ಈ ವರ್ಷದ ತೆರಿಗೆ ( ಟ್ಯಾಕ್ಸ್) ವಿಚಾರವಾಗಿ ನೀವು ತಿಳಿದುಕೊಂಡಿರಬೇಕಾದ ಕೆಲವು  ಅಂಶಗಳು : -*

*ಈವರ್ಷ ಸುಮಾರು ಶೇ 95%* ಜನ ಶಿಕ್ಷಕರು ತೆರಿಗೆಗೆ ಒಳಪಡುತ್ತಾರೆ.*. ಏಕೆಂದರೆ ನಾವು ಎಲ್ಲರೂ 7ನೇ ವೇತನ ಪಡಿಯುತ್ತಿದ್ದು ಅದರ ಜೊತೆಗೆ ವಾರ್ಷಿಕ ಬಡ್ತಿ.ಕಾಲಮಿತಿ ಬಡ್ತಿ.  ಪಡೆದಿರುವುದರಿಂದ ತೆರಿಗೆಯನ್ನು ಭರಿಸಬೇಕಾಗುವದು*


*ಕಳೆದ  ವರ್ಷದ ಹಾಗೆ ಈ ವರ್ಷವೂ ಸಹ ಎರಡು ರೀತಿಯ ತೆರಿಗೆ ಲೆಕ್ಕಾಚಾರವಿದೆ.(Old regime.New regime)*


*New Tax Regime* 

*👉ಹೊಸ ತೆರಿಗೆಯಲ್ಲಿ ಯಾವದೇ ಉಳಿತಾಯ ಮಾಡಲು ಬರುವುದಿಲ್ಲ.*

*👉ಒಟ್ಟು ವೇತನ 7 ಲಕ್ಷ ಮತ್ತು 75000 Standard deduction=775000 ರೂ ಆದಾಯ  ಇದ್ದರೆ ತೆರಿಗೆ ಬರುವುದಿಲ್ಲ.*

*👉7.75000 ಕ್ಕಿಂತ ಅಧಿಕ ವೇತನ ಪಡೆಯುತ್ತಿದ್ದರೆ ಈ ಕೆಳಗಿನಂತೆ ಆದಾಯ ತೆರಿಗೆಗೆ ಒಳಪಡುತ್ತೀರಿ*

*👉೦-3 ಲಕ್ಷಕ್ಕೆ ತೆರಿಗೆ ಇಲ್ಲ*

*👉3-7 ಲಕ್ಷಕ್ಕೆ 5%. ಅಂದರೆ 20000 ರೂ.ತೆರಿಗೆ ಭರಿಸಬೇಕು.*

*👉7-10 ಲಕ್ಷಕ್ಕೆ 20000+10% (30000) =50000.ರೂ ತೆರಿಗೆ ಭರಿಸಬೇಕು*

 *👉ತೆರಿಗೆ.10-12 ಲಕ್ಷಕ್ಕೆ 50000+ 15% ತೆರಿಗೆ (30000) = 80000 ರೂ ತೆರಿಗೆ ಭರಿಸಬೇಕು.*

*👉12-  15ಲಕ್ಷಕ್ಕೆ 80000ರೂ +20% ತೆರಿಗೆ (60000)  =140000 ರೂ ತೆರಿಗೆ ಭರಿಸಬೇಕು*


*Old Tax Regi‍me*

*🙏ಶಿಕ್ಷಕ ಬಂಧುಗಳ ಆದಾಯ ತೆರಿಗೆ ಲೆಕ್ಕಾಚಾರ ಸರಳಗೊಳಿಸಲು ಸೂಚನೆಗಳು:🙏*


* *ಇದರಲ್ಲಿ 5 ಲಕ್ಷ ಒಳಗಿನ ಆದಾಯಕ್ಕೆ ತೆರಿಗೆ ಬರುವದಿಲ್ಲ.*

* *5-1೦ ಲಕ್ಷ ವರೆಗಿನ ಅದಾಯಕ್ಕೆ 125೦೦+20%(100000)= 112500 ತೆರಿಗೆ ಭರಿಸಬೇಕು*

* *1೦ ಲಕ್ಷ  ಮೇಲ್ಪಟ್ಟ ಆದಾಯಕ್ಕೆ 112500+3೦% ರಷ್ಟು ಕಟ್ಟಬೇಕಾಗುವದು.*

 *ಹಳೆ ಪದ್ದತಿಯಲ್ಲಿ ಉಳಿತಾಯ ಮಾಡಲು ಈ ಕೆಳಗಿನಂತಿವೆ*

* *80C:- (ಈಗಾಗಲೇ ವೇತನದಲ್ಲೇ ಕಟಾವಣೆಗಳ ಒಟ್ಟು ಮೊತ್ತ ರೂ 1,50,000 ಮೀರಿದವರಿಗೆ ಈ ಕೆಳಗಿನವುಗಳು ಅನ್ವಯಿಸುವುದಿಲ್ಲ)*
* 1) ಮಕ್ಕಳ ಟ್ಯೂಷನ್ ಫೀ ರಸೀದಿ
* 2) PLI ತುಂಬಿದ ದಾಖಲೆ
* 3) ಕೈಯಿಂದ ತುಂಬುವ      LIC ಕಂತು
* 4) NSC
* 5) ಸುಕನ್ಯಾ ಸಮೃದ್ಧಿ
* 6) ವಾಪಸ್ಸು ತುಂಬಿದ ಗೃಹ ಸಾಲದ ಅಸಲು
•   7) ಇತರೆ

* *80 ಸಿ ಅಡಿ ರೂ. 1,50,000 ಮೀರಿದ್ದರೂ ನೇರವಾಗಿ ಆದಾಯದಲ್ಲಿ ಕಟಾವಣೆಗೆ ಇರುವ ಅವಕಾಶಗಳು*

* *ಗೃಹ ಸಾಲದ ಬಡ್ಡಿ ತುಂಬುತ್ತಿರುವವರು ಬ್ಯಾಂಕ್ ನಿಂದ 'Provisional Interest Certificate' ಅಂತಾ ಕೇಳಿ (ಸ್ಟೇಟ್ ಮೆಂಟ್ ಅಂತಾ ಕೇಳಿ ತರಬೇಡಿರಿ) ಪಡೆದುಕೊಂಡು ಪೂರೈಸಿರಿ.*

* *80 D:- ಆರೋಗ್ಯ ವಿಮೆ ಸ್ವಂತ ಹಾಗೂ ಅವಲಂಬಿತರ ಹೆಸರಿನಲ್ಲಿ ಆರೋಗ್ಯ ವಿಮೆ ಮಾಡಿಸಲು ತುಂಬಿದ ಪ್ರೀಮಿಯಂ ಗೆ ಗರಿಷ್ಟ 25000 ವರೆಗೆ ಆದಾಯದಲ್ಲಿ ವಿನಾಯಿತಿ ಸಿಗುತ್ತದೆ.,*

* *80 DD:- ವಿಕಲಚೇತನ ಅವಲಂಬಿತರ ವೈದ್ಯಕೀಯ ವೆಚ್ಚ ಅವಲಂಬಿತರು ವಿಕಲಚೇತನರಾಗಿದ್ದಲ್ಲಿ ಅವರ ವೈಕಲ್ಯ ಪ್ರಮಾಣ ಶೇ 40-79 ಇದ್ದಲ್ಲಿ ಗರಿಷ್ಠ ರೂ 75,000 ಅಥವಾ ಶೇ 80 ಕ್ಕಿಂತ ಹೆಚ್ಚಿದ್ದಲ್ಲಿ ಗರಿಷ್ಠ ರೂ 1,25,000 ಆದಾಯದಿಂದ ಕಳೆಯಲ್ಪಡುತ್ತದೆ.*

* *80 DDB:- ನಿರ್ಧಾರಿತ ಖಾಯಿಲೆಗಳಿಗೆ ಚಿಕಿತ್ಸಾ ವೆಚ್ಚ ವಿನಾಯಿತಿ ಆದಾಯ ತೆರಿಗೆ ಇಲಾಖೆಯು ಕೆಲವು ನಿರ್ಧಾರಿತ ರೋಗಗಳಿಗೆ ಮಾಡುವ ವೆಚ್ಚಕ್ಕೆ ವಿನಾಯಿತಿ ನೀಡುತ್ತದೆ. ತಾವು ಅಥವಾ ತಮ್ಮಅವಲಂಬಿತರು ಅಂತಹ ರೋಗಗಳಿಗೆ ಚಿಕಿತ್ಸೆ ಪಡೆದಿದ್ದಲ್ಲಿ ರಸೀದಿಗಳು ಹಾಗೂ  ಹಾಗೂ ಎಂ.ಡಿ ಅಥವಾ ಎಂ.ಎಸ್ ಪದವಿ ಹೊಂದಿದ ವೈದ್ಯರಿಂದ '10 - I' ಪ್ರ.ಪತ್ರ ಪಡೆದು ಸಲ್ಲಿಸಬೇಕು. ಆ ನಿರ್ಧಾರಿತ ರೋಗಗಳ ಪಟ್ಟಿ ಈ ಕೆಳಗಿನಂತೆ ಇದೆ, ಇದನ್ನು ಸಕ್ಷಮ ವೈದ್ಯರೇ ನಿರ್ಧರಿಸಿ ಪ್ರಮಾಣ ಪತ್ರ ನೀಡಬೇಕಾಗುತ್ತದೆ. ಈ ಕೆಳಗಿನ ಚಿಕಿತ್ಸೆ ಗೆ ಮಾತ್ರ*

* (i)   Neurological Diseases where the disability level has been certified to be of 40% and above,—
* (a)   Dementia ;
* (b)   Dystonia Musculorum Deformans ;
* (c)   Motor Neuron Disease ;
* (d)   Ataxia ;
* (e)   Chorea ;
* (f)   Hemiballismus ;
* (g)   Aphasia ;
* (h)   Parkinsons Disease ;
* (ii)   Malignant Cancers ;
* (iii)   Full Blown Acquired Immuno-Deficiency Syndrome (AIDS) ;
* (iv)   Chronic Renal failure ;
* (v)   Hematological disorders :
* (i)   Hemophilia ;
* (ii)   Thalassaemia.

* *80 CCD 1(B):- NPS ಗೆ ಹೆಚ್ಚುವರಿಯಾಗಿ ಸಂದಾಯ ಮಾಡಿದ ಮೊತ್ತ. ವೇತನದಲ್ಲಿ ಕಟಾವಣೆಯಾಗುವ ಮೊತ್ತವಲ್ಲದೇ ಎನ್.ಪಿ.ಎಸ್ ಗೆ ಹೆಚ್ಚುವರಿಯಾಗಿ ಹಣ ತುಂಬಿದ್ದರೆ ಗರಿಷ್ಠ ರೂ 50000 ವರೆಗೆ ವಿನಾಯಿತಿ ಇದೆ.*

* *80 E:- ಶಿಕ್ಷಣ ಸಾಲದ ಬಡ್ಡಿ ನೌಕರನು ತನ್ನ ಹಾಗೂ ಅವಲಂಬಿತರ ಶಿಕ್ಷಣ ಸಾಲದ ಬಡ್ಡಿ ತುಂಬಿದ್ದರೆ ಅದಕ್ಕೆ ವಿನಾಯಿತಿ ಸಿಗುತ್ತದೆ.* 

* *80 G:- ದೇಣಿಗೆ/ದಾನ ಕ್ಕೆ ವಿನಾಯಿತಿ. ಆದಾಯ  ಇಲಾಖೆಯಲ್ಲಿ 80ಜಿ ಅಡಿ ನೋಂದಣಿ ಮಾಡಿಕೊಂಡು ಚಾಲ್ತಿ ಪ್ರಮಾಣಪತ್ರ ಹೊಂದಿರುವ ಟ್ರಸ್ಟ್ / ಸಂಸ್ಥೆಗಳಿಗೆ ದಾನ ನೀಡಿದ್ದರೆ ಗರಿಷ್ಟ ಒಟ್ಟು ವೇತನದ ಶೇ 10 ಕ್ಕೆ ವಿನಾಯಿತಿ ಸಿಗುತ್ತದೆ.*
* *ಸರಕಾರೇತರ ಟ್ರಸ್ಟ್ ಗಳಿಗೆ ನೀಡಿರುವ ದೇಣಿಗೆಯ ಶೇ 50 ರಷ್ಟು ಮಾತ್ರ ನಿಮ್ಮ ಆದಾಯದಿಂದ ಕಳೆಯಲ್ಪಡುತ್ತದೆ.*
* *ಸರಕಾರಿ ನಿಧಿಗಳಾಗಿದ್ದಲ್ಲಿ ನೀಡಿರುವ ದೇಣಿಗೆಯ ಶೇ 100 ರಷ್ಟು ಮಾತ್ರ ನಿಮ್ಮ ಆದಾಯದಿಂದ ಕಳೆಯಲ್ಪಡುತ್ತದೆ.*  
*   *ರೂ 2000 ಕ್ಕಿಂತ ಹೆಚ್ಚಿಗೆ ದೇಣಿಗೆ ನೀಡುವವರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯಿಂದ ಚೆಕ್/ಡಿ.ಡಿ/NEFT/RTGS ವಿಧಾನದ ಮುಖಾಂತರವೇ ಹಣ ಸಂದಾಯ ಮಾಡಿರಬೇಕಾಗುತ್ತದೆ** 
*  *80 U:- ಸ್ವತಃ ನೌಕರನೇ ವಿಕಲಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಪೂರೈಸಿರಿ.*

* *HRA ಮನೆ ಬಾಡಿಗೆ ತೆಗೆದುಕೊಳ್ಳಬಹುದು.ಆದರೆ ಈ ವರ್ಷ ಹಳೆ ಪದ್ಧತಿಯಲ್ಲಿ ಹೆಚ್ಚು ತೆರಿಗೆ ಬರುವುದರಿಂದ ಹೆಚ್ಚಿನವರಿಗೆ ಮನೆ ಬಾಡಿಗೆ (HRA) ಉಪಯೋಗವಾಗುವು ದಿಲ್ಲ.*

Money: ತೆರಿಗೆ ಇಲ್ಲದೇ 85000 ರೂಪಾಯಿ ಆದಾಯ ಹೀಗೆ ಪಡೆಯಿರಿ!

ಪಿಪಿಎಫ್‌ನಲ್ಲಿ ನಿಮಗೆ 7.1 ಬಡ್ಡಿ ದರ ಸಿಗುತ್ತದೆ. ಇದನ್ನು ತೆರೆಯವುದು ಕೂಡ ಸುಲಭ. ಯಾರಾದರೂ ಕೇವಲ 500 ರೂಪಾಯಿಯೊಂದಿಗೆ ಪೋಸ್ಟ್ ಆಫೀಸ್ ಅಥವಾ ಬ್ಯಾಂಕ್‌ನಲ್ಲಿ ಈ ಖಾತೆಯನ್ನು ತೆರೆಯಬಹುದು.

ಈ ಯೋಜನೆಯಲ್ಲಿ ನೀವು ತಿಂಗಳಿಗೆ 85 ಸಾವಿರ ರೂಪಾಯಿ ಬಡ್ಡಿ ಕೂಡ ಗಳಿಸಬಹುದು. ಹೇಗೆ ಅಂತಾ ನೋಡೋ ಮುನ್ನ ಈ ಯೋಜನೆ ಬಗ್ಗೆ ಒಂದಿಷ್ಟು ಮಾಹಿತಿ ತಿಳಿಯೋಣ.

ಪಿಪಿಎಫ್‌ ಯೋಜನೆ

ಸಾರ್ವಜನಿಕ ಭವಿಷ್ಯ ನಿಧಿಯು ನಿವೃತ್ತಿ-ಕೇಂದ್ರಿತ ಯೋಜನೆಯಾಗಿದ್ದು, ಹೂಡಿಕೆದಾರರು ತಮ್ಮ ಪೋರ್ಟ್‌ಫೋಲಿಯೊ ವೈವಿಧ್ಯೀಕರಣಕ್ಕಾಗಿ ಬಳಸುತ್ತಾರೆ. ಒಬ್ಬರು ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಪಿಪಿಎಫ್ ಖಾತೆಯನ್ನು ತೆರೆಯಬಹುದು. ಇದು ವ್ಯಕ್ತಿಗಳಿಗೆ ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 80C ಅಡಿಯಲ್ಲಿ ಖಾತರಿಪಡಿಸಿದ ರಿಟರ್ನ್ಸ್ ಮತ್ತು ತೆರಿಗೆ ಪ್ರಯೋಜನಗಳನ್ನು ನೀಡುತ್ತದೆ.

ಸಣ್ಣ ಉಳಿತಾಯ ಯೋಜನೆಯು ವೇತನದಾರರು ಮತ್ತು ಸ್ವಯಂ ಉದ್ಯೋಗಿ ಸೇರಿದಂತೆ ಎಲ್ಲಾ ವ್ಯಕ್ತಿಗಳಿಗೆ ಮುಕ್ತವಾಗಿದೆ. ಅಪ್ರಾಪ್ತ ವಯಸ್ಕರರ ಪೋಷಕರು ಕೂಡ ಮಕ್ಕಳ ಹೆಸರಲ್ಲಿ ಈ ಖಾತೆಯನ್ನು ತೆರೆಯಬಹುದು.

ಪಿಪಿಎಫ್‌ ಖಾತೆಯ ಮೆಚ್ಯುರಿಟಿ ಅವಧಿ

ಮೆಚುರಿಟಿ ಅವಧಿಯು 15 ವರ್ಷಗಳಾಗಿದ್ದು, 15 ವರ್ಷಗಳ ನಂತರ, ಖಾತೆದಾರರು ತಲಾ 5 ವರ್ಷಗಳ ಅನಿಯಮಿತ ಬ್ಲಾಕ್‌ಗಳಿಗೆ ಖಾತೆಯನ್ನು ವಿಸ್ತರಿಸಬಹುದು.

ಕನಿಷ್ಠ-ಗರಿಷ್ಠ ಹೂಡಿಕೆ

ಈ ಖಾತೆಯನ್ನು ತೆರೆಯುವಾಗ ನೀವು ಕೇವಲ 500 ರೂಪಾಯಿಯಿಂದ ಆರಂಭಿಸಿ, ಗರಿಷ್ಠ 1.5 ಲಕ್ಷ ರೂವರೆಗೆ ಹೂಡಿಕೆ ಮಾಡಬಹುದು.

ತೆರಿಗೆ ಪ್ರಯೋಜನಗಳು

ಪಿಪಿಎಫ್‌ನಲ್ಲಿ ರೂ 1.5 ಲಕ್ಷದವರೆಗಿನ ಕೊಡುಗೆಗಳಿಗೆ ಸೆಕ್ಷನ್ 80 ಸಿ ಅಡಿಯಲ್ಲಿ ಯಾವುದೇ ತೆರಿಗೆ ಬರುವುದಿಲ್ಲ. ಇಲ್ಲಿ ಗಳಿಸಿದ ಬಡ್ಡಿ ಮತ್ತು ಕಾರ್ಪಸ್ ಸಹ ತೆರಿಗೆ ಮುಕ್ತವಾಗಿರುತ್ತದೆ.

ಮೆಚುರಿಟಿ ಅವಧಿಯ ಮೊದಲು ಪಿಪಿಎಫ್‌ ಮೊತ್ತವನ್ನು ಹಿಂಪಡೆಯಬಹುದೇ?

ಪಿಪಿಎಫ್‌ ಖಾತೆದಾರರಿಗೆ 5 ವರ್ಷಗಳ ನಂತರ ಹಣಕಾಸು ವರ್ಷದಲ್ಲಿ ಒಂದು ಬಾರಿ ಹಿಂಪಡೆಯಲು ಅನುಮತಿ ಇರುತ್ತದೆ.

15 ವರ್ಷಗಳ ನಂತರ ಏನಾಗುತ್ತದೆ ನಿಮ್ಮ ಪಿಪಿಎಫ್‌ ಖಾತೆ?

ಮುಕ್ತಾಯದ ಅವಧಿಯ 15 ವರ್ಷಗಳ ನಂತರ, ಹೂಡಿಕೆದಾರರು ಠೇವಣಿಗಳೊಂದಿಗೆ ಅಥವಾ ಇಲ್ಲದೆ ತಮ್ಮ ಖಾತೆಗಳನ್ನು ಮುಂದುವರಿಸಬಹುದು.

ಪಿಪಿಎಫ್‌ ಯೋಜನೆಯಲ್ಲಿ ತಿಂಗಳಿಗೆ 85,000 ರೂಪಾಯಿ ಆದಾಯ ಪಡೆಯುವುದು ಹೇಗೆ?

ಪಿಪಿಎಫ್‌ ಹೂಡಿಕೆ ಯೋಜನೆಯಲ್ಲಿ ನೀವು ತಿಂಗಳಿಗೆ 85,000 ರೂಪಾಯಿ ಗಳಿಸಬೇಕು ಅಂದರೆ, ಪ್ರತಿ ಹಣಕಾಸು ವರ್ಷದಲ್ಲಿ ರೂ 1.50 ಲಕ್ಷ ಹೂಡಿಕೆಯೊಂದಿಗೆ ಪ್ರಾರಂಭಿಸಬೇಕು ಮತ್ತು 15 ವರ್ಷಗಳ ಮೆಚುರಿಟಿ ಅವಧಿಯವರೆಗೆ ಅದನ್ನು ಮುಂದುವರಿಸಬೇಕು. ಬಡ್ಡಿಯ ಗರಿಷ್ಠ ಲಾಭವನ್ನು ಪಡೆಯಲು, ಪ್ರತಿ ಹಣಕಾಸು ವರ್ಷದಲ್ಲಿ ಏಪ್ರಿಲ್ 1-5 ರ ನಡುವೆ ಹೂಡಿಕೆ ಮಾಡಬೇಕು.

15 ವರ್ಷಗಳ ನಂತರ ಪಿಪಿಎಫ್ ಕಾರ್ಪಸ್

15 ವರ್ಷಗಳಲ್ಲಿ‌ ನಿಮ್ಮ ಹೂಡಿಕೆಯ ಮೊತ್ತವು ರೂ 22,50,000 ಆಗಿರುತ್ತದೆ, ಇದರಲ್ಲಿ ಅಂದಾಜು ಬಡ್ಡಿ ರೂ 18,18,209 ಆಗಿರುತ್ತದೆ ಮತ್ತು ಅಂದಾಜು ಮೆಚ್ಯೂರಿಟಿ ರೂಪಾಯಿ 40,68,209 ಆಗಿರುತ್ತದೆ.

15 ವರ್ಷಗಳ ನಂತರ ಹೂಡಿಕೆದಾರರು ಮತ್ತೆ 5 ವರ್ಷಗಳ ವಿಸ್ತರಣೆಯನ್ನು ತೆಗೆದುಕೊಳ್ಳಬಹುದು ಮತ್ತು ಮೊದಲಿನ ರೀತಿಯಲ್ಲಿಯೇ ವರ್ಷಕ್ಕೆ 1.50 ಲಕ್ಷ ರೂ. ಹೂಡಿಕೆ ಮಾಡಿ ಆರಂಭಿಸಬಹುದು.

20 ವರ್ಷಗಳ ನಂತರ ಪಿಪಿಎಫ್ ಕಾರ್ಪಸ್

20 ವರ್ಷಗಳಲ್ಲಿ, ಒಟ್ಟು ಹೂಡಿಕೆಯು 30,00,000 ರೂ ಆಗಿರುತ್ತದೆ, ಅಂದಾಜು ಬಡ್ಡಿಯು ರೂ 36,58,288 ಆಗಿರುತ್ತದೆ ಮತ್ತು ಅಂದಾಜು ಕಾರ್ಪಸ್ ರೂ 66,58,288 ಆಗಿರುತ್ತದೆ. ಈ ಹಂತದಲ್ಲೂ, ಹೂಡಿಕೆದಾರರು ಖಾತೆ ವಿಸ್ತರಣೆಯನ್ನು ತೆಗೆದುಕೊಳ್ಳಬಹುದು

25 ವರ್ಷಗಳ ನಂತರ ಪಿಪಿಎಫ್ ಕಾರ್ಪಸ್

25 ವರ್ಷಗಳಲ್ಲಿ, ಒಟ್ಟು ಹೂಡಿಕೆಯು 37,50,000 ರೂ ಆಗಿರುತ್ತದೆ, ಅಂದಾಜು ಬಡ್ಡಿಯು ರೂ 99,26,621 ಆಗಿರುತ್ತದೆ ಮತ್ತು ಅಂದಾಜು ಕಾರ್ಪಸ್ ರೂ 1,03,08,015 ಆಗಿರುತ್ತದೆ.

29 ವರ್ಷಗಳ ನಂತರ ಪಿಪಿಎಫ್ ಕಾರ್ಪಸ್ ‌

29 ವರ್ಷಗಳಲ್ಲಿ, ಒಟ್ಟು ಹೂಡಿಕೆಯು 43,50,000 ರೂ ಆಗಿರುತ್ತದೆ, ಅಂದಾಜು ಬಡ್ಡಿಯು ರೂ 99,26,621 ಆಗಿರುತ್ತದೆ ಮತ್ತು ಅಂದಾಜು ಕಾರ್ಪಸ್ ರೂ 1,42,76,621 ಆಗಿರುತ್ತದೆ.

29 ವರ್ಷಗಳ ಹೂಡಿಕೆಯ ನಂತರ ಮುಂದೇನು?

ಇಲ್ಲಿಂದ ಮುಂದೆ, ಹೂಡಿಕೆದಾರರು ಸಂಪೂರ್ಣ ಕಾರ್ಪಸ್ ಮೇಲಿನ ಬಡ್ಡಿಯನ್ನು ಹಿಂಪಡೆಯಲು ಪ್ರಾರಂಭಿಸಬಹುದು. ವಿಸ್ತರಣೆಗಳ ಸಮಯದಲ್ಲಿ, ಖಾತೆದಾರರಿಗೆ ವರ್ಷಕ್ಕೊಮ್ಮೆ ಬಡ್ಡಿ ಮೊತ್ತವನ್ನು ಹಿಂಪಡೆಯಲು ಅನುಮತಿಸಲಾಗಿದೆ.

ನಿಮ್ಮ ಬಡ್ಡಿ ಮೊತ್ತ ಎಷ್ಟು?

7.1 ರಷ್ಟು ಬಡ್ಡಿ ದರದಲ್ಲಿ, ಒಂದು ವರ್ಷದಲ್ಲಿ ಬಡ್ಡಿಯು 10,13,640 ರೂ ಆಗಿರುತ್ತದೆ, ಅಂದರೆ ತಿಂಗಳಿಗೆ ಇಲ್ಲಿ ನಿಮಗೆ 85,000 ರೂಪಾಯಿ ಸಿಗುತ್ತದೆ.

Sunday, December 29, 2024

ಪ್ರಯತ್ನಿಸಿ

ಸೋಮಲಿಂಗ್ ಉಪ್ಪಾರ್  ಅವರು ಎಲ್ಲಾ ಮೀಡಿಯಾಗಳಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸಿದ್ದಾರೆ ಅವರೆಲ್ಲ ಲಿಂಕ್ ಗಳಿಗಾಗಿ ಕೆಳಗಿನವುಗಳನ್ನು ಸಂಪರ್ಕಿಸಬಹುದು

https://t.me/kestkannada

2 K set examination📲
Kset full information
https://t.me/kestkannada

https://t.me/somalingmuppar

4  https://t.me/bcwdkalaburagi

5 ಗ್ರಾಮ ಪಂಚಾಯತಿ ಕವಲಗಾ
Kawalga in Aland taluk kalaburagi district
https://t.me/Grampanchayatkawalga

6 ಸೋಮು ಮಾಹಿತಿ ವೇದಿಕೆ
ಕನ್ನಡದಲ್ಲಿ
https://t.me/somalingmuppa

7. https://kawalgasomu.blogspot.com/?m=1

https://somalingmuppar76.blogspot.com/?m=1&zx=8ea9acdcb00f4100

http://somalingmuppark76.blogspot.com/?m=1


10 https://bcwdhostel.blogspot.com/?m=1

11 http://upparcommunitykar.blogspot.com/

12 https://youtube.com/channel/UCPJZtsdMQ_Zx9a9kqNx3nnQ

13 https://youtube.com/c/somalinguppar9008032272

Saturday, December 14, 2024

pm kisan mandhan yojana: ಈ ಸರ್ಕಾರಿ ಯೋಜನೆ ಮೂಲಕ ಪ್ರತಿ ತಿಂಗಳು 3000 ರೂ. ಪಿಂಚಣಿ ಪಡೆಯಿರಿ


pm kisan mandhan yojana: ಈ ಸರ್ಕಾರಿ ಯೋಜನೆ ಮೂಲಕ ಪ್ರತಿ ತಿಂಗಳು 3000 ರೂ. ಪಿಂಚಣಿ ಪಡೆಯಿರಿ


ಕೇಂದ್ರ ಸರ್ಕಾರವು ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅನೇಕ ಯೋಜನೆಗಳನ್ನು ಪ್ರಾರಂಭಿಸುತ್ತದೆ. ಇನ್ನು ಕೇಂದ್ರ ಸರ್ಕಾರವು ಈಗಾಗಲೇ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳಲ್ಲಿ ಪಿಎಂ ಕಿಸಾನ್‌ ಮಾನ್-ಧನ್ ಯೋಜನೆ ಕೂಡ ಒಂದಾಗಿದೆ.


ಇದರ ಪ್ರಕಾರ ರೈತರು ಪ್ರತಿ ತಿಂಗಳು 55 ರೂ ಠೇವಣಿ ಮಾಡಬೇಕಿದ್ದು, ಬಳಿಕ ವ್ಯಕ್ತಿಗೆ 60 ವರ್ಷ ತುಂಬಿದ ಬಳಿಕ ಪ್ರತೀ ತಿಂಗಳು 3000 ಸಾವಿರ ರೂ. ಮಾಸಿಕ ಪಿಂಚಣಿ ವ್ಯವಸ್ಥೆ ಪಡೆಯಲು ಅರ್ಹರಾಗುತ್ತಾರೆ.


ಯಾವ ಆರಂಭವಾಗಿದ್ದ ಯೋಜನೆ


ಪ್ರಧಾನ ಮಂತ್ರಿ ಕಿಸಾನ್ ಮಾನ್-ಧನ್ ಯೋಜನೆ (PMKMY) ಅನ್ನು 12 ಸೆಪ್ಟೆಂಬರ್ 2019 ರಂದು ಪ್ರಾರಂಭಿಸಲಾಗಿತ್ತು. ಬಡ ರೈತರಿಗೆ ವೃದ್ಧಾಪ್ಯದಲ್ಲಿ ನೆರವಾಗುವುದು ಇದರ ಮುಖ್ಯ ಉದ್ದೇಶವಾಗಿದೆ. ಅವರ ಖಾತೆಗೆ ಪ್ರತಿ ತಿಂಗಳು ನಿಗದಿತ ಹಣ ಬರುತ್ತದೆ. ಯಾವುದೇ ಸಣ್ಣ ಮತ್ತು ಅತಿಸಣ್ಣ ರೈತರು ಇದರ ಪ್ರಯೋಜನ ಪಡೆಯಬಹುದಾಗಿದೆ. ಇನ್ನು ಈ ಯೋಜನೆಯ ಲಾಭ ಪಡೆಯಲು ರೈತರು ಪ್ರತೀ ತಿಂಗಳು 55 ರೂಪಾಯಿಗಳನ್ನು ಠೇವಣಿ ಮಾಡಬೇಕಾಗುತ್ತದೆ. ಅದೇ ಸಮಯದಲ್ಲಿ ಸರ್ಕಾರ ಕೂಡ ಅಷ್ಟೇ ಮೊತ್ತವನ್ನು ಜೊತೆಯಾಗಿ ಠೇವಣಿ ಮಾಡುತ್ತಾರೆ. ಹೀಗೆ ಒಟ್ಟಾಗಿ ಎರಡೂ ಕಡೆಗಳಿಂದ ಒಟ್ಟು 110 ರೂ. ಮೊತ್ತವು ಠೇವಣಿ ಮಾಡಿದಂತಾಗುತ್ತದೆ.


ಯಾರೆಲ್ಲಾ ಇದರ ಲಾಭ ಪಡೆಯಬಹುದು?


ಇನ್ನು ಈ ಯೋಜನೆಯ ಲಾಭವನ್ನು ಸರ್ಕಾರವು ಹಲವು ಇತರೆ ವಿಭಾಗಗಳಿಗೂ ವಿಸ್ತರಿಸಿಕೊಂಡಿದೆ. ಅಂದರೆ ಚಾಲಕ ರಿಕ್ಷಾ ಎಳೆಯುವವನು, ಚಮ್ಮಾರ, ಟೈಲರ್, ಕಾರ್ಮಿಕ, ಮನೆ ಕೆಲಸಗಾರರು ಕೂಡ ಇದರ ಲಾಭ ಪಡೆದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.


ಒಂದು ವೇಳೆ ಮರಣ ಸಂಭವಿಸಿದರೆ?

ಒಂದು ವೇಳೆ ಮರಣ ಸಂಭವಿಸಿದರೆ?


ಇನ್ನು ಒಂದು ವೇಳೆ ಫಲಾನುಭವಿಯು ಒಂದು ವೇಳೆ ಹಣ ಕಟ್ಟುತ್ತಿರುವ ಮಧ್ಯದಲ್ಲೇ ಮರಣ ಸಂಭವಿಸಿದರೆ ಏನಾಗುತ್ತದೆ ಎಂಬುದು ಸಹಜವಾಗಿಯೇ ಎಲ್ಲರ ಪ್ರಶ್ನೆಯಾಗಿದೆ. ಆದರೆ ಇದಕ್ಕೆ ಸರ್ಕಾರ ತನ್ನದೇ ಆದ ಸರಳ ನಿಯಮವನ್ನು ರೂಪಿಸಿಕೊಂಡಿದೆ. ಒಂದು ವೇಳೆ ಯೋಜನೆಯ ನಡುವಿನಲ್ಲೇ ಫಲಾನುಭವಿ ಮರಣ ಹೊಂದಿದರೆ ಆತನ ಪತ್ನಿಯು ಯೋಜನೆಗೆ ಹಣ ಕಟ್ಟುವ ಮೂಲಕ ಯೋಜನೆಯನ್ನು ಮುಂದುವರೆಸಬಹುದು. ಆದರೆ ಒಂದು ವೇಳೆ ಪತ್ನಿಯು ಯೋಜನೆಯಲ್ಲಿ ಮುಂದುವರೆಯಲು ಇಚ್ಚಿಸದಿದ್ದರೆ ಈಗಾಗಲೇ ಕಟ್ಟಿದ ಹಣವನ್ನು ಬಡ್ಡಿ ಸಮೇತ ಮರಳಿಸಲಾಗುತ್ತದೆ.


ಎಷ್ಟು ಹಣವನ್ನು ಠೇವಣಿ ಇಡಬೇಕು?


ಒಂದು ವೇಳೆ ನೀವು ಫಲಾನುಭವಿ 18 ವರ್ಷ ವಯಸ್ಸಿವರಾಗಿದ್ದರೆ ಪ್ರತೀ ತಿಂಗಳು 55 ರೂ.ಗಳನ್ನು ಠೇವಣಿ ಇಡಬೇಕಾಗುತ್ತದೆ. ಅದೇ ರೀತಿ ಫಲಾನುಭವಿ 29 ವರ್ಷ ವಯಸ್ಸಿನವರಾಗಿದ್ದರೆ 100 ರೂ.ಗಳನ್ನು ಠೇವಣಿ ಇಡಬೇಕಾಗುತ್ತದೆ. ಇನ್ನು ಫಲಾನುಭವಿ 40 ವರ್ಷದವನಾಗಿದ್ದರೆ ವ್ಯಕ್ತಿಯು ಪ್ರತೀ ತಿಂಗಳು 200 ರೂ. ಠೇವಣಿ ಇಡಬೇಕು ಎಂದು ಸರ್ಕಾರವು ನಿಯಮ ರೂಪಿಸಿದೆ.


ಇನ್ನು ಇಲ್ಲಿ ಒಂದು ವಿಷಯವನ್ನು ಎಲ್ಲರೂ ತಿಳಿದುಕೊಳ್ಳಬೇಕಿದೆ. ನಾವು ಎಷ್ಟು ವರ್ಷ ವಯಸ್ಸಿನವರಾಗಿದ್ದು, ಒಂದು ನಿರ್ದಿಷ್ಟ ಮೊತ್ತವನ್ನು ಪಾವತಿಸುತ್ತಿದ್ದರೆ ಸರ್ಕಾರ ಕೂಡ ಅಷ್ಟೇ ಮೊತ್ತವನ್ನು ಠೇವಣಿ ಇಡುತ್ತದೆ. ಇನ್ನು ವ್ಯಕ್ತಿಯು 18ರಿಂದ 40ರ ಒಳಗಿನ ವಯಸ್ಸಿನರಾಗಬೇಕಿದ್ದು, ಆದಾಯ ತೆರಿಗೆ ಪಾವತಿದಾರನಾಗಿರಬಾರದು. ಮೊಬೈಲ್ ಫೋನ್, ಆಧಾರ್ ಸಂಖ್ಯೆ ಮತ್ತು ಉಳಿತಾಯ ಖಾತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಅಲ್ಲದೆ ಅರ್ಜಿದಾರರ ಮಾಸಿಕ ಆದಾಯ ರೂ 15,000 ಮೀರಬಾರದು.


ಯಾವೆಲ್ಲಾ ದಾಖಲೆಗಳ ಅಗತ್ಯವಿದೆ?


ಸಾಮಾನ್ಯವಾಗಿ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಹಲವು ದಾಖಲೆಗಳನ್ನು ನೀಡಬೇಕಾಗಿರುವುದು ಸಾಮಾನ್ಯ ಸಂಗತಿ. ಅದೇ ರೀತಿ ಈ ಯೋಜನೆಗೂ ಇದು ಅನ್ವಯವಾಗುತ್ತದೆ. ಇನ್ನು ಯೋಜನೆಯ ಲಾಭ ಪಡೆಯಲು ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪಾಸ್ಬುಕ್, ಮೇಲ್‌ ಐಡಿ, ಮೊಬೈಲ್ ಸಂಖ್ಯೆ, ಪಾಸ್ಪೋರ್ಟ್ ಗಾತ್ರದ ಫೋಟೋವನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗುತ್ತದೆ.


ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?


ಈ ಯೋಜನೆಯ ಲಾಭ ಪಡೆಯಲು maandhan.in ವೆಬ್‌ಸೈಟ್‌ಗೆ ಲಾಗಿನ್‌ ಆಗಬೇಕು. ಅಲ್ಲಿ ಸ್ವಯಂ ನೋಂದಣಿ ಆಯ್ಕೆಯನ್ನು ಕ್ಲಿಕ್‌ ಮಾಡಿ, ಇದೇ ಸಮಯದಲ್ಲಿ ಮೊಬೈಲ್‌ ಬಂದ ಒಟಿಪಿ ನಮೂದಿಸಿ ನೊಂದಾಯಿಸಬಹುದು. ಬಳಿಕ ಆನ್‌ ಲೈನ್‌ ಫಾರ್ಮ್‌ ಅನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ, ಸಲ್ಲಿಸಬೇಕು.



ಕರ್ನಾಟಕದಲ್ಲಿರುವ ವಸತಿ ರಹಿತರಿಗಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ ವಿವಿಧ ಯೋಜನೆಗಳು: ಅರ್ಜಿ ಸಲ್ಲಿಸೋದು ಹೇಗೆ?


ಕರ್ನಾಟಕದಲ್ಲಿರುವ ವಸತಿ ರಹಿತರಿಗಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ ವಿವಿಧ ಯೋಜನೆಗಳು: ಅರ್ಜಿ ಸಲ್ಲಿಸೋದು ಹೇಗೆ?


ಪ್ರತಿಯೊಬ್ಬರಿಗೂ ಸ್ವಂತ ಸೂರು ಇರಬೇಕೆಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ಅಡಿಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆ ಇಲ್ಲದ ಅರ್ಹರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರ ಅನುದಾನವನ್ನು ನೀಡುತ್ತದೆ.


ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಮಂದಿ ಬಡವರಿ ಈ ಯೋಜನೆಗಳು ಅನುಕೂಲವಾಗಿದ್ದು, ಸ್ವಂತ ಮನೆಯನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಗಿದೆ.


ಪ್ರಧಾನ ಮಂತ್ರಿ ಆವಾಸ್ ಯೋಜನೆ, ಡಾ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ದೇವರಾಜ್ ಅರಸು ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ(ಬಸವ ವಸತಿ ಯೋಜನೆ), ದೇವರಾಜ್ ಅರಸು ವಸತಿ ಯೋಜನೆ ಹಾಗೂ ಡಾ ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆ ಹೀಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪ್ರತಿಯೊಬ್ಬರಿಗೂ ವಸತಿ ಕಲ್ಪಿಸುವ ಹಲವು ಯೋಜನೆಗಳು ಚಾಲ್ತಿಯಲ್ಲಿವೆ.


ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮುಖ್ಯ ಉದ್ದೇಶವೆಂದರೆ ಗ್ರಾಮೀಣ ಭಾಗದ ಕುಟುಂಬಗಳಿಗೆ ಅವರ ಕನಸಿನ ಮನೆ ಕಟ್ಟಿಸಿಕೊಡುವುದಾಗಿದೆ. ಅಷ್ಟೇ ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಮನೆಯ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪಾಳುಬಿದ್ದ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಮೂಲಭೂತ ಸೌಕರ್ಯವೂ ಈ ಯೋಜನೆಯಲ್ಲಿ ಸೇರಿವೆ.


ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿ ವರ್ಷದ ಬಜೆಟ್ ಗಳಲ್ಲಿ ವಸತಿ ಯೋಜನೆಗಳಿಗಾಗಿಯೇ ಇಂತಿಷ್ಟು ಹಣವನ್ನು ಮೀಸಲಿಡುತ್ತವೆ. ಆಯಾ ವರ್ಷಗಳಲ್ಲಿ ಬಡವರಿಗೆ ಮನೆಗಳನ್ನು ಕಟ್ಟಿಕೊಡುವ ಅಥವಾ ಆರ್ಥಿಕ ನೆರವಿನ ಮೂಲಕ ಬಡವರ ಸ್ವಂತ ಮನೆಯ ಕನಸನ್ನು ನನಸು ಮಾಡುತ್ತಿವೆ.


ವಸತಿ ರಹಿತರು ಮನೆಗಾಗಿ ಅರ್ಜಿ ಸಲ್ಲಿಸುವುದು ಹೇಗೆ?


ರಾಜೀವ್ ಗಾಂಧಿ ವಸತಿ ಯೋಜನೆ


ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ-ಆರ್ ಜಿಆರ್ ಎಚ್ ಸಿಎಲ್ ಯಲ್ಲಿ ವಸತಿ ರಹಿತರು ಮನೆಗಾಗಿ ಅರ್ಜಿ ಸಲ್ಲಿಸಬಹುದು.

ಮೊದಲು ಆರ್ ಜಿಆರ್ ಎಚ್ ಸಿಎಲ್ ವೆಬ್ ಸೈಟ್ ಗೆ ಭೇಟಿ ನೀಡಿ

ನೋಂದಣಿ ಅಥವಾ ಆನ್ ಲೈನ್ ಅಪ್ಲಿಕೇಷನ್ ಮೇಲೆ ಕ್ಲಿಕ್ ಮಾಡಿ

ಹೆಸರು, ಲಿಂಗ, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ ಸೇರಿದಂತೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ನಮೂದಿಸಿ

ವಿಳಾಸ, ವಾರ್ಷಿಕ ಆದಾಯ ಹಾಗೂ ಆಧಾರ್ ಸಂಖ್ಯೆಯನ್ನು ತಪ್ಪಿದೆ ನಮೂದಿಸಬೇಕು

ಇದಾದ ಬಳಿಕ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ

ಸರ್ಕಾರ ವಸತಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)


ಈ ಯೋಜನೆಯ ಅಡಿಯಲ್ಲಿ ಮನೆಯನ್ನು ಪಡೆಯಲು ನಿಮ್ಮ ಪಂಚಾಯಿತಿಗೆ ಭೇಟಿ ನೀಡಿ ಮನೆಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಪಿಎಂಎವೈ ಯೋಜನೆಯ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಆರ್ಥಿಕ ನೆರವು ನೀಡಲಾಗುತ್ತದೆ

ಕರ್ನಾಟಕ ಸರ್ಕಾರವು ಪಿಎಂಎವೈ ಅಡಿಯಲ್ಲಿ ನಿರ್ಮಿಸಲಾಗುವ ಪ್ರತಿ ಮನೆಗೆ 3.5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುತ್ತದೆ

Raghavendra M Y

Thursday, December 8, 2022

ಸರ್ಕಾರಿ ನೌಕರರು/ Govrnment Employees

 

ಸರ್ಕಾರಿ ನೌಕರರು/ Govrnment Employees

ಕ್ರಮ ಸಂಖ್ಯೆ

Serial No 

ಹುದ್ಧೆ

Designation

ಗ್ರೂಪ್

Group

Payscale

5ನೇ ವೇತನ ಆಯೋಗ

6ನೇ ವೇತನ ಆಯೋಗ

7ನೇ ವೇತನ ಆಯೋಗ

1

ಆಯುಕ್ತರು

A

 

 

 

 

2

ಜಂಟಿ ನಿರ್ದೇಶಕರು

A

74400-109600

40050-56550

74400-109600

?

3

ಉಪ ನಿರ್ದೇಶಕರು

A

67550-104600

36300-53550

67550-104600

?

4

ಮುಖ್ಯ ಲೆಕ್ಕಾಧಿಕಾರಿಗಳು

A

67550-104600

36300-53550

67550-104600

?

5

ಲೆಕ್ಕಾಧಿಕಾರಿ

A

52650-97100

28100-50100

52650-97100

?

6

ಸಹಾಯಕ  ನಿರ್ದೇಶಕರು/

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು

A

52650-97100

28100-50100

52650-97100

?

7

ಪ್ರಾಶುಪಾಲರು(PETC)

A

52650-97100

28100-50100

52650-97100

?

8

ಸೀನಿಯರ್ ಪ್ರೊಗ್ರಾಮರ್

A

52650-97100

28100-50100

52650-97100

?

 

 

 

 

 

 

 

9

ಪತ್ರಾಂಕಿತ ವ್ಯವಸ್ಥಾಪಕರು/ ತಾಲ್ಲೂಕಾ ಹಿಂದಿಳಿದ ವರ್ಗಗಳ ಕಲ್ಯಾಣಾಧಿಕಾರಿಗಳು

B

43100-83900

22800-43200

43100-83900

?

10

ಸಹಾಯಕ  ನಿರ್ದೇಶಕರು ( ಯೋ.ಸಾಂ)

B

43100-83900

22800-43200

43100-83900

?

11

ಜೂನಿಯರ್ ಪ್ರೊಗ್ರಾಮರ್

B

43100-83900

22800-43200

43100-83900

?

12

ಲೆಕ್ಕ ಅಧೀಕ್ಷಕರು

B

43100-83900

21600-40050

43100-83900

?

 

 

 

 

 

 

 

13

ಕಛೇರಿ ಮೇಲ್ವಿಚಾರಕರು/ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು

C

37900-70850

20000-36300

37900-70850

?

14

ನಿಲಯ ಪಾಲಕರು

C

37900-70850

20000-36300

37900-70850

?

15

ನಿಲಯ  ಮೇಲ್ವಿಚಾರಕರು

C

27650-52650

14550-26700

 

44425-83700

16

ಕಿರಿಯ ಇಂಜಿನಿಯರ್ ( ಸಿವಿಲ್)

C

33450-62600

17650-32000

33450-62600

?

17

ಮಹಿಳಾ  ಕಲ್ಯಾಣ ಕೇಂದ್ರ ಸಂಚಾಲಕರು

C

21400-42000

11600-21000

21400-42000

?

18

ಶೀಘ್ರಾಲಿಪಿಗಾರರು

C

27650-52650

14550-26700

27650-52650

?

19

ಸಾಂಖ್ಯಿಕ ನಿರೀಕ್ಷಕರು

C

27650-52650

14550-26700

27650-52650

?

20

ಪ್ರಥಮ ದರ್ಜೆ ಸಹಾಯಕರು

( ಲೆಕ್ಕಪತ್ರ)

C

27650-52650

14550-26700

27650-52650

?

21

ಆಶ್ರಮ ಶಾಲಾ ಶಿಕ್ಷಕರು

C

23500-47650

12500-24000

23500-47650

?

22

ಹೊಲಿಗೆ ತರಬೇತಿ ಶಿಕ್ಷಕರು  

C

23500-47650

12500-24000

23500-47650

?

23

ದ್ವಿತಿಯ  ದರ್ಜೆ ಸಹಾಯಕರು

( ಲೆಕ್ಕಪತ್ರ)

C

21400-42000

11600-21000

21400-42000

?

24

ಕಿರಿಯ ನಿಲಯ ಮೇಲ್ವಿಚಾರಕರು

C

21400-42000

11600-21000

21400-42000

34100-67600

25

ಬೆರಳಚ್ಚುಗಾರರು

C

21400-42000

11600-21000

21400-42000

?

26

ಡೇಟಾ ಎಂಟ್ರಿ ಆಪರೇಟರ್

C

21400-42000

11600-21000

21400-42000

?

27

ವಾಹನ ಚಾಲಕರು

C

21400-42000

11600-21000

21400-42000

?

 

 

 

 

 

 

 

28

ಅಡುಗೆಯವರು

D

18600-32600

10400-16400

18600-32600

34100-67600

29

ಅಡುಗೆ ಸಹಾಯಕರು

D

17000-28950

9600-14550

17000-28950

27000-46675

30

ರಾತ್ರಿ ಕಾವಲುಗಾರರು

D

17000-28950

9600-14550

17000-28950

27000-46675

31

ಜವಾನರು

D

17000-28950

9600-14550

17000-28950

27000-46675

jila panchayat taluka panchayat chunav ane

'ಚುನಾವಣೆ ವಿಚಾರ ನ್ಯಾಯಾಲಯಗಳ ಮುಂದಿರುವುದರಿಂದ ಅಲ್ಲಿಯೇ ಇತ್ಯರ್ಥವಾಗಬೇಕು. ಚುನಾವಣೆ ನಡೆಸಲು ನಾವಂತೂ ತಯಾರಾಗಿದ್ದೇವೆ' ಎಂದು ಸಿಎಂ ಸಿದ್ದರಾಮ...