Followers

Tuesday, November 9, 2021

ಅಂತಾರಾಷ್ಟ್ರೀಯ ರೇಡಿಯಾಲಜಿ ದಿನ

 ಅಂತರಾಷ್ಟ್ರೀಯ ರೇಡಿಯಾಲಜಿ ದಿನ: 08 ನವೆಂಬರ್


ಅಂತಾರಾಷ್ಟ್ರೀಯ ರೇಡಿಯಾಲಜಿ ದಿನವನ್ನು ಪ್ರತಿ ವರ್ಷ ನವೆಂಬರ್ 8 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ.ವಿಕಿರಣಶಾಸ್ತ್ರವು ಸುರಕ್ಷಿತ ರೋಗಿಗಳ ಆರೈಕೆಗೆ ಕೊಡುಗೆ ನೀಡುತ್ತದೆ ಎಂಬ ಮೌಲ್ಯದ ಅರಿವನ್ನು ಉತ್ತೇಜಿಸಲು ಮತ್ತು ಆರೋಗ್ಯ ರಕ್ಷಣೆಯ ನಿರಂತರತೆಯಲ್ಲಿ ವಿಕಿರಣಶಾಸ್ತ್ರಜ್ಞರು ಮತ್ತು ರೇಡಿಯೋಗ್ರಾಫರ್‌ಗಳು ವಹಿಸುವ ಪ್ರಮುಖ ಪಾತ್ರದ ಬಗ್ಗೆ ಸಾರ್ವಜನಿಕ ತಿಳುವಳಿಕೆಯನ್ನು ಸುಧಾರಿಸಲು ದಿನವನ್ನು ಆಚರಿಸಲಾಗುತ್ತದೆ.ಈ ದಿನವು 1895 ರಲ್ಲಿ ವಿಲ್ಹೆಲ್ಮ್ ರೋಂಟ್ಜೆನ್ ಅವರಿಂದ ಕ್ಷ-ಕಿರಣಗಳ ಆವಿಷ್ಕಾರದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ. ವಿಶ್ವ ರೇಡಿಯಾಲಜಿ ದಿನವನ್ನು ಮೊದಲು 2012 ರಲ್ಲಿ ಆಚರಿಸಲಾಯಿತು.ವಿಕಿರಣಶಾಸ್ತ್ರವು ವೈದ್ಯಕೀಯ ವಿಭಾಗವಾಗಿದ್ದು ಅದು ಪ್ರಾಣಿಗಳು ಮತ್ತು ಮಾನವರ ದೇಹದಲ್ಲಿನ ರೋಗಗಳನ್ನು ಪತ್ತೆಹಚ್ಚಲು ಮತ್ತು ಚಿಕಿತ್ಸೆ ನೀಡಲು ವೈದ್ಯಕೀಯ ಚಿತ್ರಣವನ್ನು ಬಳಸುತ್ತದೆ.

Education learn all: ಅರ್ಥಶಾಸ್ತ್ರ

Education learn all: ಅರ್ಥಶಾಸ್ತ್ರ: 🌎ಅರ್ಥಶಾಸ್ತ್ರ 👇👇👇👇👇👇 1) SEBI ವಿಸ್ತರಿಸಿರಿ? 👉 Security Exchange Board of India. 2) ಭಾರತದಲ್ಲಿ ಒಟ್ಟಾರೆ ಎಷ್ಟು ಷೇರು ವಿನಿಮಯ ಕೇಂದ್ರಗಳಿವೆ? 👉 ...

Monday, July 22, 2019


ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪರಿಷ್ಕೃತ ಪದಕ್ರಮ ಪಟ್ಟಿಗಳು

ಪದಕ್ರಮ ಪಟ್ಟಿಗಳು
ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು.

1ಜಂಟಿ ನಿರ್ದೇಶಕರು
2ಉಪ ನಿರ್ದೇಶಕರು
3ಜಿಲ್ಲಾ ಅಧಿಕಾರಿಗಳು
4ಪತ್ರಾಂಕಿತ ವ್ಯವಸ್ಥಾಪಕರು
5ಪ್ರಥಮ ದರ್ಜೆ ಸಹಾಯಕರು
6ದ್ವಿತೀಯ ದರ್ಜೆ ಸಹಾಯಕರು
7ಶೀಘ್ರಲಿಪಿಗಾರರು
8ಹಿರಿಯ ಬೆರಳಚ್ಚುಗಾರರು / ಬೆರಳಚ್ಚುಗಾರರು
9ಹೊಲಿಗೆ ತರಬೇತಿ ಶಿಕ್ಷಕರು
10ಮಹಿಳಾ ಕಲ್ಯಾಣ ಕೇಂದ್ರ ಸಂಚಾಲಕಿಯರು
11ವಾಹನ ಚಾಲಕರು
12ಆಶ್ರಮಶಾಲಾ ಶಿಕ್ಷಕರು
13ಕಛೇರಿ ಮೇಲ್ವಿಚಾರಕರು / ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು
14ನಿಲಯ ಪಾಲಕರು (ಪುರುಷ)
15ನಿಲಯ ಪಾಲಕರು (ಮಹಿಳೆ)
16ನಿಲಯ ಮೇಲ್ವಿಚಾರಕರು (ಪುರುಷ)
17ನಿಲಯ ಮೇಲ್ವಿಚಾರಕರು (ಮಹಿಳೆ)
18ಕಿರಿಯ ನಿಲಯ ಮೇಲ್ವಿಚಾರಕರು(ಪುರುಷ)
19ಕಿರಿಯ ನಿಲಯ ಮೇಲ್ವಿಚಾರಕರು(ಮಹಿಳೆ)
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸ್ವರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-37) (2016-17ನೇ ಸಾಲಿನ ತರಬೇತಿ, ಅರಿವು ಮತ್ತು ಪ್ರೋತ್ಸಾಹ, ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮದಡಿ ಒದಗಿಸಿರುವ ಆಯವ್ಯಯ ರೂ.3466.00 ಲಕ್ಷಗಳಲ್ಲಿ ಹಂಚಿಕೆ ಮಾಡಲಾಗುವುದು)
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್ ಹಾಗೂ ಬ್ಯಾಂಕ್ ಪ್ರೊಬೇಷನರ್ ಆಫೀಸರ್ಸ್ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ
ತರಬೇತಿಯನ್ನು ಪ್ರತಿಷ್ಟಿತ ಖಾಸಗಿ ತರಬೇತಿ ಸಂಸ್ಥೆಗಳ ಮೂಲಕ ನೀಡಲಾಗುತ್ತಿದೆ.
ಅರ್ಹತೆಗಳು:
1.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಅಭ್ಯರ್ಥಿಯು ಐ.ಎ.ಎಸ್, ಕೆ.ಎ.ಎಸ್ ಅಥವಾ ಬ್ಯಾಂಕ್
ಪ್ರೊಬೇಷನರ್ ಆಫೀಸರ್ಸ್ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಳಲ್ಲಿ ಯಾವುದಾರೊಂದಕ್ಕೆ ಒಂದು ಬಾರಿ ಮಾತ್ರ ಉಚಿತ
ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಬಹುದು.
2.ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿದ ಅರ್ಹ
ಅಭ್ಯರ್ಥಿಗಳು oಟಿಟiಟಿe ಮೂಲಕ ಅರ್ಜಿಗಳನ್ನು ಸಲ್ಲಿಸುವುದು.
3.ಅಭ್ಯರ್ಥಿಯ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ.4.50 ಲಕ್ಷ ಹಾಗೂ ಪ್ರವರ್ಗ 2(ಎ),
3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ರೂ.3.50 ಲಕ್ಷಗಳು.
4.ಅಭ್ಯರ್ಥಿಯು ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
5.ಅಭ್ಯರ್ಥಿಯು ಯಾವುದಾದರೊಂದು ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರನಾಗಿರಬೇಕು ಅಥವಾ ಕೇಂದ್ರ ಲೋಕಸೇವಾ ಆಯೋಗ/ಕರ್ನಾಟಕ
ಲೋಕಸೇವಾ ಆಯೋಗ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು (ಬ್ಯಾಂಕ್) ಕೋರುವ ಷರತ್ತಿಗೊಳಪಟ್ಟಿರಬೇಕು.
6.ಅಭ್ಯರ್ಥಿಯ ವಯೋಮಿತಿ ಕನಿಷ್ಠ 21 ವರ್ಷ ವಯಸ್ಸಿನವರಾಗಿರಬೇಕು.
7.ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳ/ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಅರ್ಜಿ ಸಲ್ಲಿಸಲು ಮತ್ತು ತರಬೇತಿ
ಪಡೆಯಲು ಅರ್ಹರಲ್ಲ.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ:
1.ದಿನಪತ್ರಿಕೆಗಳು/ವೆಬ್‍ಸೈಟ್ ಮುಖಾಂತರ ವ್ಯಾಪಕ ಪ್ರಚಾರವನ್ನು ನೀಡಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ
ಅರ್ಜಿಗಳನ್ನು ಅಹ್ವಾನಿಸಲಾಗುವುದು.
2.ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಏರ್ಪಡಿಸಲಾಗುವುದು ಹಾಗೂ ಲಿಖಿತ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು,
ಪ್ರವರ್ಗವಾರು ಮೀಸಲಾತಿ,ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಹಾಗೂ ಈ ಸಂಸ್ಥೆಗಳಿಗೆ ಸರ್ಕಾರ ನಿಗದಿಪಡಿಸುವ ಸಂಖ್ಯೆ
ಗಳಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಅವರ ಮೂಲ ದಾಖಲೆಗಳ ಪರಿಶೀಲನೆ ಮಾಡಿದ ನಂತರ ತರಬೇತಿಗಾಗಿ ಕೌನ್ಸಿ
-ಲಿಂಗ್ ಮೂಲಕ ವಿವಿಧ ತರಬೇತಿ ಸಂಸ್ಥೆಗಳಿಗೆ ನಿಯೋಜಿಸಲಾಗುವುದು.
3.ಲಿಖಿತ ಪರೀಕ್ಷೆಯು ಇಂಗ್ಲೀಷ್, ಸಾಮಾನ್ಯ ಜ್ಞಾನ ಮತ್ತು ಗಣಿತ ಇತ್ಯಾದಿ ವಿಷಯಗಳನ್ನು ಒಳಗೊಂಡಿರುತ್ತದೆ.
ತರಬೇತಿಗೆ ಆಯ್ಕೆಯಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡುವ ಸೌಲಭ್ಯಗಳು:
1.ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಮಾಸಿಕ ತರಬೇತಿ ಭತ್ಯೆಯನ್ನು ಕೆಳಕಂಡಂತೆ ನೀಡಲಾಗುವುದು.
ಕ್ರ. ಸಂ.ಪರೀಕ್ಷಾ ಪೂರ್ವ ತರಬೇತಿತರಬೇತಿ ಸಂಸ್ಥೆಯ ಸ್ಥಳತರಬೇತಿ ಭತ್ಯೆ (ಪ್ರತಿ ಅಭ್ಯರ್ಥಿಗೆ)
1ಐ.ಎ.ಎಸ್.
ದೆಹಲಿ
ಹೈದರಾಬಾದ್
ಬೆಂಗಳೂರು
6000 + ತರಬೇತಿ ವೆಚ್ಚ
10000 + ತರಬೇತಿ ವೆಚ್ಚ
ತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲೆಯ ಅಭ್ಯರ್ಥಿಗಳಿಗೆ
2000 ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೆ 4000 ಹಾಗೂ ತರಬೇತಿ ವೆಚ್ಚ
2ಕೆ.ಎ.ಎಸ್.ಕರ್ನಾಟಕತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲೆಯ ಅಭ್ಯರ್ಥಿಗಳಿಗೆ 2000
ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೆ 4000 ಹಾಗೂ ತರಬೇತಿ ವೆಚ್ಚ
3ಬ್ಯಾಂಕಿಂಗ್ಕರ್ನಾಟಕತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲೆಯ ಅಭ್ಯರ್ಥಿಗಳಿಗೆ 2000
ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೆ 4000 ಹಾಗೂ ತರಬೇತಿ ವೆಚ್ಚ
2.ತರಬೇತಿ ಶುಲ್ಕವನ್ನು ಇಲಾಖೆಯಿಂದಲೇ ತರಬೇತಿ ಸಂಸ್ಥೆಗೆ ಪಾವತಿಸಲಾಗುವುದು.
3.ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಯಿಂದ ಒಂದು ಸೆಟ್ ಕೋರ್ಸ್ ಮೆಟೀರಿಯಲ್ ಅನ್ನು
ನೀಡಲಾಗುವುದು.
4. ಐ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸ್ವಂತ ಸ್ಥಳದಿಂದ ತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ
ಒಂದು ಬಾರಿ ಹೋಗಿ ಬರಲು ದ್ವಿತೀಯ ದರ್ಜೆ ರೈಲ್ವೆ (ಸ್ಲೀಪರ್) ಪ್ರಯಾಣ ಭತ್ಯೆ ನೀಡಲಾಗುವುದು.
ಐ.ಎ.ಎಸ್ ಪರೀಕ್ಷೆಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು
ಕೌಶಲ್ಯ ತರಬೇತಿ ಕಾರ್ಯಕ್ರಮ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-37) (2016-17ನೇ ಸಾಲಿನ ತರಬೇತಿ, ಅರಿವು ಮತ್ತು ಪ್ರೋತ್ಸಾಹ,ಹಿಂದುಳಿದ ವರ್ಗಗಳ
ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮದಡಿ ಒದಗಿಸಿರುವ ಆಯವ್ಯಯ ರೂ.3466.00 ಲಕ್ಷಗಳಲ್ಲಿ ಹಂಚಿಕೆ ಮಾಡಲಾಗುವುದು)
ಹಿಂದುಳಿದ ವರ್ಗಗಳ ನಿರುದ್ಯೋಗಿ ಮಹಿಳಾ/ಪುರುಷ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಸ್ವಯಂ ಉದ್ಯೋಗ ರೂಪಿಸಿಕೊಳ್ಳಲು
2015-16 ನೇ ಸಾಲಿನಲ್ಲಿ ಈ ಕೆಳಕಂಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
1.ಬೆಂಗಳೂರಿನ ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (NIFT) ಸಂಸ್ಥೆಯ ಮೂಲಕ ಫ್ಯಾಷನ್ ಟೆಕ್ನಾಲಜಿ ತರಬೇತಿ.
1.National Institute of Fashion Technology, ಬೆಂಗಳೂರು ಸಂಸ್ಥೆಯ ಮೂಲಕ ಫ್ಯಾಶನ್ ಟೆಕ್ನಾಲಜಿಯ,
ಈ ಕೆಳಗಿನ ಕೋರ್ಸ್‍ಗಳಿಗೆ ಉಚಿತ ತರಬೇತಿಯನ್ನು ನೀಡಲಾಗುವುದು.
Sl. No.CourseMinimum QualificationAge limitDuration
1Garment manufacturing technology
(Developing Line supervisor)
10+2 Pass18-356 months
2Apparel quality control, product
analysis and assurance
10+2 Pass18-356 months
3Garment construction (Developing Sewing
operators for Garment manufacturing units
and also boutique establishment)
10+2 Pass18-356 months
2.ತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲೆಯ ಅಭ್ಯರ್ಥಿಗಳಿಗೆ ರೂ.1000/-
ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೆ ರೂ.3000/-ಗಳು.
2.VTU ಕೌಶಲ್ಯ ಅಭಿವೃದ್ಧಿ ತರಬೇತಿ ಕೆಂದ್ರÀಗಳ ಮೂಲಕ ಕೌಶಲ್ಯ ತರಬೇತಿ.
1.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರಗಳಾದ ಬೆಂಗಳೂರು, ಬೆಳಗಾವಿ,
ಕಲಬುರ್ಗಿ ಹಾಗೂ ಮೈಸೂರು ವಿಭಾಗೀಯ ಕೇಂದ್ರಗಳ ಮೂಲಕ ಈ ಕೆಳಗಿನ ಕೋರ್ಸ್‍ಗಳಿಗೆ ಉಚಿತ ತರಬೇತಿಯನ್ನು
ನೀಡಲಾಗುವುದು (ಒಬ್ಬ ಅಭ್ಯರ್ಥಿಗೆ ಒಂದು ಕೋರ್ಸ್‍ನಲ್ಲಿ ಮಾತ್ರ ತರಬೇತಿಯನ್ನು ನೀಡಲಾಗುವುದು).
Sl. No.CourseMinimum QualificationAge limitDuration
1Bar Bending8 Pass18-352 months
2Masonary
3Shuttering Carpentry
4Plumbing
5Painting
6Scaffolding
2.ತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲೆಯ ಅಭ್ಯರ್ಥಿಗಳಿಗೆ ರೂ.1000/-
ಮತ್ತು ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೆ ರೂ.3000/-ಗಳು.
VTU ಮೂಲಕ ತರಬೇತಿ
3.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ಕೆಳಕಂಡ ತರಬೇತಿ ಸಂಸ್ಥೆಗಳ ಮೂಲಕ ತರಬೇತಿ:
1.ಕ.ರಾ.ರ.ಸಾ.ನಿಗಮ:
1) ಕೇಂದ್ರಿಯ ತರಬೇತಿ ಕೇಂದ್ರ, ಬೆಂಗಳೂರು
2) ಪ್ರಾದೇಶಿಕ ತರಬೇತಿ ಕೇಂದ್ರ, ಮಳವಳ್ಳಿ
3) ಪ್ರಾದೇಶಿಕ ತರಬೇತಿ ಕೇಂದ್ರ, ಹಾಸನ
2.ಬೆಂ.ಮ.ಸಾ.ಸಂಸ್ಥೆ:
1)ಚಾಲಕ ತರಬೇತಿ ಕೇಂದ್ರ, ವಡ್ಡರಹಳ್ಳಿ, ಬೆಂಗಳೂರು
3.ಈ.ಕ.ರ.ಸಾ.ನಿಗಮ:
1) ಪ್ರಾದೇಶಿಕ ತರಬೇತಿ ಕೇಂದ್ರ, ಹುಮನಾಬಾದ್
2) ಚಾಲಕ ತರಬೇತಿ ಕೇಂದ್ರ, ಹಗರಿಬೊಮ್ಮನಹಳ್ಳಿ
4.ವಾ.ಕ.ರ.ಸಾ.ನಿಗಮ:
1) ಪ್ರಾದೇಶಿಕ ತರಬೇತಿ ಕೇಂದ್ರ, ಹುಬ್ಬಳ್ಳಿ
ಅ) ನಿಗದಿಪಡಿಸಿರುವ ಅರ್ಹತೆಗಳು:
1) ವಯೋಮಿತಿ: ಕನಿಷ್ಠ 21 ವರ್ಷಗಳು ಗರಿಷ್ಠ 35 ವರ್ಷಗಳು ಪೂರ್ಣಗೊಂಡಿರಬೇಕು.
2) ಎಲ್.ಎಂ.ವಿ ಪರವಾನಗಿ ಪಡೆದು ಕನಿಷ್ಠ ಒಂದು ವರ್ಷ ಪೂರ್ಣಗೊಂಡಿರಬೇಕು. ಒಂದು ವೇಳೆ ಟ್ರ್ಯಾಕ್ಟರ್
ಎಲ್.ಎಂ.ವಿ ಆಗಿದ್ದರೆ ಪರವಾನಗಿ ಪಡೆದು 2 ವರ್ಷ ಪೂರ್ಣಗೊಂಡಿರಬೇಕು.
3) ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.
ಆ) ವಿದ್ಯಾರ್ಥಿಗಳಿಗೆ ಒದಗಿಸಲಾಗುವ ಸೌಲಭ್ಯಗಳ ವಿವರಗಳು:
1) ಉಚಿತ ಊಟ ಮತ್ತು ವಸತಿ ವ್ಯವಸ್ಥೆ.
2) ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ರೂ.1,000/- ತರಬೇತಿ ಭತ್ಯೆ ಹಾಗೂ ರೂ.500/- ಸಮವಸ್ತ್ರ
ಭತ್ಯೆಯನ್ನು ತರಬೇತಿ ಮುಕ್ತಾಯಗೊಂಡ ಬಳಿಕ ನೀಡಲಾಗುವುದು.
4.ಜಿಲ್ಲಾ ಮಟ್ಟದಲ್ಲಿ ಲಘು ವಾಹನ ಚಾಲನಾ ತರಬೇತಿ
1) ಲಘು/ಭಾರೀ ವಾಹನ ಚಾಲನಾ ತರಬೇತಿ ಪಡೆಯುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು,
ಹಿಂದುಳಿದ ವರ್ಗಗಳ ಪ್ರವರ್ಗ-1/2ಎ/3ಎ/3ಬಿ ಗೆ ಸೇರಿರಬೇಕು.
2) ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
3) ಕನಿಷ್ಠ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು.
4) ಭಾರೀ ವಾಹನ ಚಾಲನಾ ತರಬೇತಿ ಪಡೆಯುವ ಅಭ್ಯರ್ಥಿಯು ಲಘು ವಾಹನ ಚಾಲನಾ ಪರವಾನಗಿ
ಪಡೆದು ಕನಿಷ್ಠ ಒಂದು ವರ್ಷ ಪೂರೈಸಿರಬೇಕು.
5) ಕೇಂದ್ರ ಮೋಟಾರು ವಾಹನ ನಿಯಮಾವಳಿಗಳು 1989 ನಿಯಮ 5 ರಂತೆ ವೈದ್ಯಕೀಯ ಪ್ರಮಾಣ
ಪತ್ರವನ್ನು ಹಾಜರುಪಡಿಸಬೇಕು.
6) ಕನಿಷ್ಠ 1 ತಿಂಗಳ ಅವಧಿಯ ತರಬೇತಿಯನ್ನು ತರಬೇತಿ ಕೇಂದ್ರಗಳು ನೀಡಬೇಕು.
7) ಸರ್ಕಾರದ ಆದೇಶ ಸಂಖ್ಯೆ: ಸಾಆ/ಪ್ರವರ್ತನ-3/ಪಿಆರ್-105/2013-14, ದಿನಾಂಕ: 27.09.2013 ರ ಅನ್ವಯ
ಈ ಕೆಳಗಿನಂತೆ ಗರಿಷ್ಠ ತರಬೇತಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅ. ಆಟೋರಿಕ್ಷಾ - ರೂ.3000/-
ಆ. ಲಘು ಮೋಟಾರು ವಾಹನ - ರೂ.4000/-
ಇ. ಸಾರಿಗೆ ವಾಹನ - ರೂ.6000/-
8) ಪ್ರಾದೇಶಿಕ ಸಾರಿಗೆ ಕಛೇರಿಗಳಿಂದ ಅಂಗೀಕೃತವಾದ ಲಘು/ಭಾರೀ ವಾಹನ ಚಾಲನಾ ತರಬೇತಿ ಕೇಂದ್ರಗಳ ಮೂಲಕ
ಮೇಲ್ಕಾಣಿಸಿದ ದರದ ಗರಿಷ್ಠ ಮಿತಿಗೆ ಒಳಪಟ್ಟು ಕರ್ನಾಟಕ ಪಾರದರ್ಶಕತೆ ಅಧಿನಿಯಮ 1999 ರನ್ವಯ ತರಬೇತಿ ಕಾರ್ಯ
ಕ್ರಮವನ್ನು ಅನುಷ್ಠಾನ ಮಾಡಲಾಗುವುದು.
9) ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ರೂ.1,000/- ತರಬೇತಿ ಭತ್ಯೆಯನ್ನು ತರಬೇತಿ ಮುಕ್ತಾಯಗೊಂಡ ಬಳಿಕ ನೀಡುವುದು.
ಅ) ತರಬೇತಿಗೆ ಅಭ್ಯರ್ಥಿಗಳ ಆಯ್ಕೆ ವಿಧಾನ:
1) ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ತರಬೇತಿ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರವನ್ನು ನೀಡಿ,
ಅರ್ಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಬೇಕು.
2) ಆಯ್ಕೆ ಸಮಿತಿ -
1ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಅಧ್ಯಕ್ಷರು
2ಪ್ರಾದೇಶಿಕ ಸಾರಿಗೆ ಅಧಿಕಾರಿಸದಸ್ಯರು
3ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಸದಸ್ಯ ಕಾರ್ಯದರ್ಶಿ
3) ಅರ್ಹ ಅರ್ಜಿಗಳನ್ನು ಪರಿಶೀಲಿಸಿ, ಈ ಕೆಳಗಿನ ಮೀಸಲಾತಿ ಅನುಪಾತದ ಆಧಾರದಲ್ಲಿ ಪ್ರತಿ ಜಿಲ್ಲೆಗೆ ಗರಿಷ್ಠ
20 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ನಿಯೋಜಿಸಬೇಕು.
ಕ್ರ. ಸಂ.ಪ್ರವರ್ಗಮೀಸಲಾತಿ ಅನುಪಾತ
1115%
22ಎ53%
33ಎ15%
43ಬಿ17%
ಒಟ್ಟು100%
4) ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲೇ ಬಿಟ್ಟು ಹೋದಲ್ಲಿ ನಿಯಮಾನುಸಾರ ತರಬೇತಿ ವೆಚ್ಚವನ್ನು ಅಭ್ಯರ್ಥಿಗಳಿಂದ
ವಸೂಲಿ ಮಾಡತಕ್ಕದ್ದು.
ಆ) ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಹತೆ:
1) ಕೋರ್ಸ್‍ಗೆ ಸಂಬಂಧಿಸಿದಂತೆ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು.
2) 18-35 ವಯೋಮಿತಿಯಲ್ಲಿರಬೇಕು.
3) ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ.2.50 ಲಕ್ಷ ಹಾಗೂ
ಪ್ರವರ್ಗ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ರೂ.1.00 ಲಕ್ಷಗಳು.
4) ಅವಧಿ: ಗರಿಷ್ಠ 6 ತಿಂಗಳ ತರಬೇತಿ.
5) ತರಬೇತಿ ಪಡೆಯಲು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ನೀಡಲಾಗುವುದು.
ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-37)(2016-17ನೇ ಸಾಲಿನ ತರಬೇತಿ, ಅರಿವು ಮತ್ತು ಪ್ರೋತ್ಸಾಹ, ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮದಡಿ ಒದಗಿಸಿರುವ ಆಯವ್ಯಯ ರೂ.3466.00 ಲಕ್ಷಗಳಲ್ಲಿ ಹಂಚಿಕೆ ಮಾಡಲಾಗುವುದು)
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ
ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುವ ದೃಷ್ಟಿಯಿಂದ 2015-16ನೇ ಸಾಲಿನಿಂದ “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಯೋಜನೆಯನ್ನು
ಆರಂಭಿಸಲಾಗಿದೆ.
“ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ” ದ ಮೊತ್ತವನ್ನು ಈ ಕೆಳಗಿನಂತೆ ನೀಡಲಾಗುತ್ತಿದೆ.
ಕ್ರ.ಸಂ.ತರಗತಿ/ಕೋರ್ಸ್ಪ್ರತಿಭಾ ಪುರಸ್ಕಾರದ ಮೊತ್ತ (ರೂ.ಗಳಲ್ಲಿ)
1ಎಸ್.ಎಸ್.ಎಲ್.ಸಿ.10000
2ದ್ವಿತೀಯ ಪಿ.ಯು.ಸಿ.15000
2ಪದವಿ/ಸ್ನಾತಕೋತ್ತರ ಪದವಿ (ಸಾಮಾನ್ಯ)20000
4ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿ
(ತಾಂತ್ರಿಕ, ವೈದ್ಯಕೀಯ ಹಾಗೂ ಸಂಬಂಧಿತ ವಿಜ್ಞಾನ)
25000
ಅರ್ಹತೆಗಳು:
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2.ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
3.ಶಾಸನಬದ್ಧ ವಿಶ್ವವಿದ್ಯಾಲಯಗಳು/ಅಧೀನಕ್ಕೆ ಒಳಪಡುವ/ಸರ್ಕಾರಿ/ಸ್ಥಳೀಯ
ಸಂಸ್ಥೆಗಳು/ ಅನುದಾನಿತ ಸಂಸ್ಥೆಗಳು/ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿರಬೇಕು.
4.ಸಮಾನ ಕೋರ್ಸ್‍ಗಳಿಗೆ ಸಂಬಂಧಿಸಿದಂತೆ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ಒದಗಿಸುವುದು.
5.ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಪ್ರವರ್ಗ-1 - ರೂ.2.50 ಲಕ್ಷ.
ಪ್ರವರ್ಗ-2(ಎ), 3(ಎ) ಮತ್ತು 3(ಬಿ) - ರೂ.1.00 ಲಕ್ಷ.
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-1 ಮತ್ತು ಅಂಧ ವಿದ್ಯಾರ್ಥಿಗಳು40%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
ಮೆರಿಟ್ ಹೊಂದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ
"ಪೂರ್ಣ ಶುಲ್ಕಗಳ ಪಾವತಿಯೊಂದಿಗೆ, ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: (ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ
2225-03-277-2-51 ಮತ್ತು ಜಿಲ್ಲಾವಲಯ ಯೋಜನೇತರ 2225-00-103-0-28)
ವಿವಿಧ ಕೋರ್ಸುಗಳಲ್ಲಿ ಅತ್ಯಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಲು ಸರ್ಕಾರವು ಸರ್ಕಾರಿ ಸಂಸ್ಥೆಗಳಿಗೆ ನಿಗದಿಪಡಿಸಿರುವ
ದರಗಳಲ್ಲಿ 5 ಶುಲ್ಕಗಳ ಜೊತೆಗೆ ಪೂರ್ಣ ಶುಲ್ಕಗಳನ್ನು ಪಾವತಿಸಲಾಗುತ್ತದೆ. ನಿಗದಿಪಡಿಸಿರುವ ಕನಿಷ್ಠ ಶೇಕಡಾವಾರು ಅಂಕಗಳ ವಿವರ ಕೆಳಕಂಡಂತಿವೆ.
ಪ್ರವರ್ಗನಿಗದಿಪಡಿಸಿದ ಕನಿಷ್ಠ ಶೇಕಡಾ ಅಂಕಗಳು
ಪ್ರವರ್ಗ-1 ಮತ್ತು ಎಲ್ಲಾ ಪ್ರವರ್ಗಗಳ ಅಂಧ ವಿದ್ಯಾರ್ಥಿಗಳು65%
ಹಿಂದುಳಿದ ವರ್ಗಗಳ ಇತರೆ ಪ್ರವರ್ಗಗಳು ಮತ್ತು ಇತರೆಯವರು70%
ಅನುದಾನ ಹಂಚಿಕೆ:
ಈ ಎರಡೂ ಕಾರ್ಯಕ್ರಮಗಳಿಗೆ ಒಂದೇ ಲೆಕ್ಕಶೀರ್ಷಿಕೆಯಡಿಯಲ್ಲಿ ಒಟ್ಟಿಗೆ ಅನುದಾನವನ್ನು ನೀಡುವುದರಿಂದ, ಈ ಎರಡೂ ಕಾರ್ಯಕ್ರಮಗಳಿಗೆ ಅನುದಾನ
ಹಂಚಿಕೆಯನ್ನು ಈ ಕೆಳಗಿನಂತೆ ಮಾಡಿಕೊಳ್ಳುವುದು.
ಅ)"ಶುಲ್ಕ ವಿನಾಯಿತಿ" ಕಾರ್ಯಕ್ರಮಕ್ಕೆ ಶೇ.60ರಷ್ಟು ಆಯವ್ಯಯವನ್ನು "ಪೂರ್ಣ ಶುಲ್ಕಗಳ ಪಾವತಿಯೊಂದಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್-ನಂತರದ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ" ಕಾರ್ಯಕ್ರಮಕ್ಕೆ ಶೇ.40ರಷ್ಟು ಆಯವ್ಯಯವನ್ನು ಹಂಚಿಕೆ ಮಾಡಿಕೊಳ್ಳುವುದು.
ಆ)ಮೇಲೆ ನಿಗದಿಪಡಿಸಿದ ಶೇಕಡಾ ಅಂಕಗಳ ಮಿತಿಯೊಳಗೆ ಬರುವ ಪ್ರವರ್ಗ-1ರ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಮತ್ತು ಎಲ್ಲಾ ಪ್ರವರ್ಗಗಳ ಅಂಧ ವಿದ್ಯಾರ್ಥಿಗಳಿಗೆ,
ನಿಗದಿತ ಪೂರ್ಣ ಶುಲ್ಕಗಳನ್ನು ಮೊದಲನೇ ಆದ್ಯತೆಯಲ್ಲಿ ಮಂಜೂರು ಮಾಡುವುದು.
ಇ)ನಂತರ ಶೇ.60 ರಷ್ಟು ಆಯವ್ಯಯ ಮತ್ತು ಶೇ.40ರಷ್ಟು ಆಯವ್ಯಯಗಳಿಗೆ ಪ್ರತ್ಯೇಕವಾಗಿ ಈ ಕೆಳಗಿನಂತೆ ಪ್ರವರ್ಗವಾರು, ಶೇಕಡಾವಾರು
ಹಂಚಿಕೆ ಮಾಡಲಾಗುವುದು.
1ಪ್ರವರ್ಗ - 2ಎಶೇಕಡ 58
2ಪ್ರವರ್ಗ - 3ಎಶೇಕಡ 16
33 ಪ್ರವರ್ಗ - 3ಬಿಶೇಕಡ 20
4ಇತರೆ ಸಮುದಾಯಗಳುಶೇಕಡ 05
5ಇತರೆ ಹಿಂದುಳಿದ ವರ್ಗಶೇಕಡ 01
ಒಟ್ಟುಶೇಕಡ 100
ಮಂಜೂರಾತಿ ಪ್ರಾಧಿಕಾರ:
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ಪಾವತಿಸುವ ಗುಂಪು-ಎ, ಗುಂಪು-ಬಿ, ಗುಂಪು-ಸಿ, ಮತ್ತು ಗುಂಪು-ಡಿ
ಕೋರ್ಸುಗಳಿಗೆ ಸಂಬಂಧಿಸಿದಂತೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯು, ಆಯಾ ಜಿಲ್ಲೆಯಲ್ಲಿ, ನಿಗದಿತ ಶುಲ್ಕ ವಿನಾಯಿತಿ
ಮಂಜೂರು ಮಾಡುವ ಪ್ರಾಧಿಕಾರ ಆಗಿರುತ್ತಾರೆ.
ಮಂಜೂರಾತಿ ವಿಧಾನ:
1.ಆನ್‍ಲೈನ್ ಮೂಲಕ ಇ-ಪಾಸ್ ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.ಮಂಜೂರು ಮಾಡುವ
ಪ್ರಾಧಿಕಾರ ಆಗಿರುತ್ತಾರೆ.
2.ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ
ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ ಇತ್ಯಾದಿ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಫಿಯನ್ನು
ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು.
3.ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ
ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
4.ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
5.ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
6.ಅರ್ಹ ವಿದ್ಯಾರ್ಥಿಗಳಿಗೆ ಆಯಾ ವರ್ಷ ಲಭ್ಯವಾಗುವ ಅನುದಾನಕ್ಕೆ ಅನುಗುಣವಾಗಿ ಅರ್ಹತೆ ಮತ್ತು
ಅಂಕಗಳ ಆಧಾರದ ಮೇಲೆ ಜಿಲ್ಲಾ ಹಂತದಲ್ಲಿ ಶುಲ್ಕ ವಿನಾಯಿತಿ ಮಂಜೂರು ಮಾಡುವುದು.
7.ಮಂಜೂರಾದ ಮೊತ್ತವನ್ನು ಸಂಬಂಧಿತ ಕಾಲೇಜುಗಳ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು.
ಶುಲ್ಕ ವಿನಾಯಿತಿ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-51 ಮತ್ತು ಜಿಲ್ಲಾವಲಯ ಯೋಜನೇತರ 2225-00-103-0-28)
(2019-20ನೇ ಸಾಲಿನ ಆಯವ್ಯಯ ರೂ.47500.00 ಲಕ್ಷಗಳು)
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನೆರವಾಗುವ ದೃಷ್ಟಿಯಿಂದ ಸರ್ಕಾರವು, ಸರ್ಕಾರದ ಕಾಲೇಜುಗಳಿಗೆ ನಿಗದಿಪಡಿಸುವ
ಶುಲ್ಕದ ದರಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಯ ಕಾಲೇಜಿನ ಪ್ರಾಂಶುಪಾಲರ ಖಾತೆಗೆ ಜಮಾಗೊಳಿಸಲಾಗುವುದು.
ವಿಶೇಷ ಸೂಚನೆ: ವಿದ್ಯಾರ್ಥಿಗಳು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆ ಗೆ ಆಧಾರ್ ಸಂಖ್ಯೆಯನ್ನು ಜೋಡಣೆ (link) ಮಾಡಿಸತಕ್ಕದ್ದು.

ಅರ್ಹತೆಗಳು:
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ
ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
2.ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ ಸಂಸ್ಥೆ / ಮಾನ್ಯತೆ ಪಡೆದ ಅನುದಾನರಹಿತ
ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
3.ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ವರಮಾನ ಈ ಕೆಳಗೆ ನಿಗದಿಪಡಿಸಿದ ಗರಿಷ್ಠ ಮಿತಿಯೊಳಗೆ ಇರಬೇಕು.
1.ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ
2.ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ ಮತ್ತು ಎಲ್ಲಾ ಧರ್ಮಗಳ,
ಜಾತಿಗಳ ಹಾಗೂ ಸಮುದಾಯಗಳ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ
3.ಸಮಾಜ ಕಲ್ಯಾಣ/ ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವ್ಯಾಪ್ತಿಗೆ ಬರುವ ವಿದ್ಯಾರ್ಥಿಗಳು ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ.
4.ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಈ ಕೆಳಗಿನಂತೆ ಕನಿಷ್ಠ
ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕ್ರ. ಸಂ.ಪ್ರವರ್ಗಹೊಸನವೀಕರಣ
1ಪ್ರವರ್ಗ-1 ಮತ್ತು ಅಂಧ ವಿದ್ಯಾರ್ಥಿಗಳು40%50%
2ಪ್ರವರ್ಗ-2ಎ, 3ಎ ಮತ್ತು 3ಬಿ50%60%
5.ಅ) ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಅರ್ಹರಿರುವುದಿಲ್ಲ.
ಆ) ಸ್ನಾತಕೋತ್ತರ, ವೈದ್ಯಕೀಯ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕೋರ್ಸಿನ ಅವಧಿಯಲ್ಲಿ
ಮೆಡಿಕಲ್ ಪ್ರಾಕ್ಟೀಸ್ ಮಾಡುತ್ತಿದ್ದಲ್ಲಿ, ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಇ) ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸುಗಳ, ಪದವಿ ಅಥವಾ ಸ್ನಾತಕೋತ್ತರ ಪದವಿಗಳಲ್ಲಿ ಉತ್ತೀರ್ಣ /
ಅನುತ್ತೀರ್ಣರಾದವರು ಅಂಗೀಕೃತ ವೃತ್ತಿಪರ ಅಥವಾ ತಾಂತ್ರಿಕ ಸರ್ಟಿಫಿಕೇಟ್, ಡಿಪ್ಲೋಮಾ, ಪದವಿ ಕೋರ್ಸುಗಳಲ್ಲಿ
ವ್ಯಾಸಂಗ ಮಾಡಿದ್ದಲ್ಲಿ ಹಾಗೂ ಇತರೆ ರೀತಿ ಅರ್ಹರಿದ್ದಲ್ಲಿ ಅವರು ಈ ಯೋಜನೆಯ ಅಡಿ ಸೌಲಭ್ಯಗಳಿಗೆ ಅರ್ಹರಿರುತ್ತಾರೆ.
ಒಂದಕ್ಕಿಂತ ಹೆಚ್ಚು ಬಾರಿ ಕೋರ್ಸುಗಳ ಬದಲಾವಣೆ ಮಾಡಿಕೊಂಡವರು ಅರ್ಹರಿರುವುದಿಲ್ಲ.
ಈ) ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ, ಈ ನಿರ್ಬಂಧ ಹೆಣ್ಣು
ಮಕ್ಕಳಿಗೆ ಅನ್ವಯಿಸುವುದಿಲ್ಲ.
6.ಅ) ಶುಲ್ಕ ವಿನಾಯಿತಿಗೆ ಅರ್ಹ ಇರುವ ಶುಲ್ಕಗಳು:ರಾಜ್ಯಮಟ್ಟದ ಸಮಿತಿಯು ನಿಗದಿಪಡಿಸುವ ದರಗಳಂತೆ ಈ ಕೆಳಗಿನ ಐದು ಶುಲ್ಕಗಳಿಗೆ
ಮಾತ್ರ ವಿನಾಯಿತಿ ನೀಡಲಾಗುವುದು.
ಅ) ಬೋಧನಾ ಶುಲ್ಕ
ಆ) ಪ್ರಯೋಗಾಲಯ ಶುಲ್ಕ (ಯಾವ ಕೋರ್ಸುಗಳಲ್ಲಿ ಪ್ರಯೋಗಾಲಯ ಕಡ್ಡಾಯವಿದೆಯೋ ಆ ಕೋರ್ಸುಗಳಿಗೆ ಮಾತ್ರ)
ಇ) ಪರೀಕ್ಷಾ ಶುಲ್ಕ
ಈ) ಕ್ರೀಡಾ ಶುಲ್ಕ
ಉ) ಗ್ರಂಥಾಲಯ ಶುಲ್ಕ
ಆ) Readers Charges ದರಗಳು:
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮೇಲಿನ ದರಗಳಂತೆ ಶುಲ್ಕ ವಿನಾಯಿತಿ ನೀಡುವುದರ
ಜೊತೆಗೆ ಈ ಕೆಳಗಿನಂತೆ ಖeಚಿಜeಡಿs ಅhಚಿಡಿges ಅನ್ನು ಸಹ ಪಾವತಿಸಲಾಗುವುದು.
ಕೋರ್ಸಿನ ಗುಂಪುReaders Charges
(10 ತಿಂಗಳಿಗೆ) (ರೂ.ಗಳಲ್ಲಿ)
ಗುಂಪು-ಎ, ಬಿ1750/-
ಗುಂಪು-ಸಿ1300/-
ಗುಂಪು-ಡಿ900/-

ಸಾರ್ವಜನಿಕರೇ ಗಮನಿಸಿ : ಡಿ.31 ರೊಳಗೆ ತಪ್ಪದೇ ಈ 4 ಪ್ರಮುಖ ಕೆಲಸಗಳನ್ನ ಮುಗಿಸಿಕೊಳ್ಳಿ.

ಡಿಸೆಂಬರ್ 31 ರ ನಂತರ ಈ ಕೆಲಸಗಳನ್ನು ಮಾಡಲು ನಿಮಗೆ ಇನ್ನೊಂದು ಅವಕಾಶ ಸಿಗುವುದಿಲ್ಲ. ಇಲ್ಲದಿದ್ದರೆ, ನೀವು ಭಾರಿ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ನಿ...